ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.
TSK
TSK · ಯೋಹಾನನು 17:15
مراجع Treasury of Scripture Knowledge في ಕನ್ನಡ IRV.
“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.
ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.
‹ನಮ್ಮನ್ನು ಶೋಧನೆಯೊಳಗೆ ಸೇರಿಸದೆ› ‹ಕೆಡುಕನಿಂದ; ನಮ್ಮನ್ನು ತಪ್ಪಿಸು›
‹ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ› ‹ನಮ್ಮ ಪಾಪಗಳನ್ನು ಕ್ಷಮಿಸು.› ‹ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ”› ಅಂದನು.
ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.
ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.