TSK

TSK · ಯೋಹಾನನು 17:2

مراجع Treasury of Scripture Knowledge في ಕನ್ನಡ IRV.

العودة إلى المقطع

“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.

ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.

ಯೇಸು ಅವರ ಹತ್ತಿರಕ್ಕೆ ಬಂದು, ‹“ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.›

‹ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು›‹ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು”› ಎಂದು ಹೇಳಿದನು.

‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.

‹ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ›‹ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.›

‹ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.›

¶ ‹“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.›

‹ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು,›‹ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.›

ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.

ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,

ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.

ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.

ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.