¶ ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.
TSK
TSK · ಯೋಹಾನನು 17:6
مراجع Treasury of Scripture Knowledge في ಕನ್ನಡ IRV.
ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.
ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.
ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,
ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
‹ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ›‹ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.›
‹ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.›
‹ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”› ಎಂದು ಹೇಳಿದನು.
‹ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.›
‹ನೀನು ಯಾರಾರನ್ನು ಕೊಟ್ಟಿದ್ದೀಯೋ›‹ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.›
‹ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.›
‹ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು,›‹ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.›
ಹೀಗೆ ‹“ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ”› ಎಂದು ತಾನೇ ಹೇಳಿದ ಮಾತು ನೆರವೇರಿತು.
¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.
ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
‹ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ›‹ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.›