ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
TSK
TSK · ಯೋಹಾನನು 18:1
مراجع Treasury of Scripture Knowledge في ಕನ್ನಡ IRV.
ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.
ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.
ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.
ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.
¶ ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, ‹“ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ”› ಎಂದು ಹೇಳಿ,
¶ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, ‹“ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ”› ಎಂದು ಹೇಳಿದನು.
¶ ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.
¶ ‹“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.›
ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು.