TSK

TSK · ಯೋಹಾನನು 19:17

مراجع Treasury of Scripture Knowledge في ಕನ್ನಡ IRV.

العودة إلى المقطع

ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.

“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.

ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.

ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ ‹“ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.›

ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.

ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, ‹“ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.

“ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.

ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, ‹“ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.›

¶ ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.

¶ ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.

ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.