ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.
TSK
TSK · ಯೋಹಾನನು 21:17
مراجع Treasury of Scripture Knowledge في ಕನ್ನಡ IRV.
ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.
ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.
‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›
ಆಗ ಪೇತ್ರನು, ‹“ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ”› ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.
ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,
‹ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ”› ಎಂದನು.
¶ ‹“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.›
ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.
ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು.
“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ.
¶ ಇದನ್ನು ಆಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ.
ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
¶ ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.
ಏಕೆಂದರೆ, ಅವರು ಕ್ರಿಸ್ತನ ಹೆಸರನ್ನು ಪ್ರಚುರಪಡಿಸುವ ನಿಮಿತ್ತವಾಗಿ ಹೊರಟಿದ್ದಾರೆ. ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.
‹ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.›