ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ.
TSK
TSK · ಯೋಹಾನನು 3:21
مراجع Treasury of Scripture Knowledge في ಕನ್ನಡ IRV.
ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.
ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು ‹“ಇಗೋ,›‹ಇವನು ನಿಜವಾದ ಇಸ್ರಾಯೇಲನು,›‹ಇವನಲ್ಲಿ ಕಪಟವಿಲ್ಲ”› ಎಂದು ಹೇಳಿದನು.
‹ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.›
ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.
¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.
ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.
ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
¶ ‹“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ,›‹ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು.›‹ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು›‹ಸತ್ತವನಾಗಿರುವೆ.›