ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.
TSK
TSK · ಯೋಹಾನನು 3:34
مراجع Treasury of Scripture Knowledge في ಕನ್ನಡ IRV.
¶ ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು.
¶ ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.
‹“ಕರ್ತನ ಆತ್ಮವು ನನ್ನ ಮೇಲೆ ಅದೆ,› ‹ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.› ‹ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ,› ‹ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ› ‹ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ›
‹ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.›
ಅದಕ್ಕೆ ಯೇಸು ‹“ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.›
‹ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ”› ಎಂದನು.
‹ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ”› ಎಂದು ಹೇಳಿದನು.
‹ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ›‹ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.›
ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.
¶ ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.
ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,
¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,