TSK

TSK · ಯೋಹಾನನು 4:10

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು

ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.

ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.

ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.

ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.

ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,

ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.

¶ ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.

¶ ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.

‹ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?”› ಅಂದನು.

“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.

‹ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು›‹ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು”› ಎಂದು ಹೇಳಿದನು.

ಯೇಸು ಅವರಿಗೆ ‹“ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ›‹ಬಾಯಾರಿಕೆಯಾಗುವುದಿಲ್ಲ.›

¶ ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು ‹“ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.›

‹ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.›

ಕರ್ತನು ಅವನಿಗೆ, ‹“ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.›

ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.

¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,