¶ ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
TSK
TSK · ಯೋಹಾನನು 5:19
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?
ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ
ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.
‹ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.›
ಯೇಸು ಅವನಿಗೆ, ‹“ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು›‹ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,”› ಎಂದು ಉತ್ತರ ಕೊಟ್ಟನು.
‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›
ಹೀಗಿರಲಾಗಿ ಯೇಸು ಅವರಿಗೆ, ‹“ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.›
‹ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ”› ಎಂದನು.
‹ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.›
‹ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.›
ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
¶ ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?
ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,
ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.