TSK

TSK · ಯೋಹಾನನು 5:23

مراجع Treasury of Scripture Knowledge في ಕನ್ನಡ IRV.

العودة إلى المقطع

ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,

ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.

ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.

ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.

‹ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.›

ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.”

‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›

¶ ‹“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.›

‹ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.›

‹ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.›

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.

ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.

ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.

ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.

ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.

ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.

ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.

ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.

ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,

¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,

ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.

ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.