TSK

TSK · ಯೋಹಾನನು 5:26

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.

ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

ಅದಕ್ಕೆ ಯೇಸು ‹“ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು”› ಅಂದನು.

¶ ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು ‹“ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.›

‹ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?”› ಎಂದು ಕೇಳಿದಕ್ಕೆ,

‹ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.›

ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.

ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.

ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.

ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.

¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,