ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
TSK
TSK · ಯೋಹಾನನು 5:30
مراجع Treasury of Scripture Knowledge في ಕನ್ನಡ IRV.
ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ.
ಯೇಸು ಅವರಿಗೆ ‹“ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.›
‹ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.›
ಹೀಗಿರಲಾಗಿ ಯೇಸು ಅವರಿಗೆ, ‹“ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.›
‹ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ, ಮಹಿಮೆಯನ್ನು ಹುಡುಕುವಾತನು ಒಬ್ಬನಿದ್ದಾನೆ, ಆತನೇ ನ್ಯಾಯಾಧಿಪತಿ.›
‹ನೀನು ನನಗೆ ಕೊಟ್ಟ ಕೆಲಸವನ್ನು ನಾನು›‹ನೆರವೇರಿಸಿ›‹ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.›
ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.
ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.