ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.
TSK
TSK · ಯೋಹಾನನು 7:26
مراجع Treasury of Scripture Knowledge في ಕನ್ನಡ IRV.
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.
ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.
ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.
ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.