ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
TSK
TSK · ಯೋಹಾನನು 7:30
مراجع Treasury of Scripture Knowledge في ಕನ್ನಡ IRV.
ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.
‹ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ”› ಎಂದು ಹೇಳಿದನು.
‹ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ”› ಎಂದು ಹೇಳಿದನು.
¶ ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.
ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.
ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.
¶ ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,
ಯೇಸು, ‹“ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.›