ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
TSK
TSK · ಯೋಹಾನನು 8:32
مراجع Treasury of Scripture Knowledge في ಕನ್ನಡ IRV.
ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು.
ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.
ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.
ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.›
‹ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.›
ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›
‹ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.›
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
¶ ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.
ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.
ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.