ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
TSK
TSK · ಯೋಹಾನನು 8:44
مراجع Treasury of Scripture Knowledge في ಕನ್ನಡ IRV.
¶ ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
¶ ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.
ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.
ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.
ಅದಕ್ಕೆ ಯೇಸು ‹“ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ”› ಎಂದನು.
‹ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ”› ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು.
ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?
ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.
ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.
ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.
ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.
ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.