ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
TSK
TSK · ಯೋಹಾನನು 8:7
مراجع Treasury of Scripture Knowledge في ಕನ್ನಡ IRV.
ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.
¶ ‹“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.›
ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.
ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?
ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.
ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.