TSK

TSK · ಯೋಹಾನನು 9:39

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,

ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!

ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;

‹ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.›

ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”

‹“ಕರ್ತನ ಆತ್ಮವು ನನ್ನ ಮೇಲೆ ಅದೆ,› ‹ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.› ‹ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ,› ‹ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ› ‹ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ›

‹ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.›

‹ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.›

‹ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.›

‹ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.›

ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,

‹ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.›

ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.

ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.

ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.

ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.