ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.
TSK
TSK · ಯೋಹಾನನು 9:4
مراجع Treasury of Scripture Knowledge في ಕನ್ನಡ IRV.
‹ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.›
ಆತನು ಅವರಿಗೆ, ‹“ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.›
¶ ಯೇಸು ಅವರಿಗೆ, ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.›
ಯೇಸು ಅವರಿಗೆ, ‹“ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?”› ಎಂದು ಕೇಳಿದ್ದಕ್ಕೆ,
ಯೇಸು, ‹“ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.›
‹ನೀನು ನನಗೆ ಕೊಟ್ಟ ಕೆಲಸವನ್ನು ನಾನು›‹ನೆರವೇರಿಸಿ›‹ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.›
ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.