¶ ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
TSK
TSK · ಯೋನ 1:3
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.
ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.
ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು.
ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.
ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು.
ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!
ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.
¶ ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು.
¶ “ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.
ಯೇಸು ಅವನಿಗೆ, ‹“ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ”› ಎಂದು ಹೇಳಿದನು.
ಆ ಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮದ ಕೆಲಸ ಮಾಡುವ ಸೀಮೋನನೆಂಬುವನ ಬಳಿಯಲ್ಲಿ ಬಹಳ ದಿನಗಳ ವರೆಗೂ ಇದ್ದನು.
ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,
ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.