TSK

TSK · ಯೆಹೋಶುವ 2:5

مراجع Treasury of Scripture Knowledge في ಕನ್ನಡ IRV.

العودة إلى المقطع

ಅರಸನ ಆಳುಗಳು ಯೊರ್ದನಿನ ದಾರಿ ಹಿಡಿದು ಹೋಗಿ ಹೊಳೆದಾಟುವ ಸ್ಥಳದವರೆಗೂ ಹುಡುಕಿದರು. ಅವರನ್ನು ಹಿಂದಟ್ಟುವವರು ಹೋದ ಕೂಡಲೇ ಹೆಬ್ಬಾಗಿಲನ್ನು ಮುಚ್ಚಿದರು.

ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.

ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”

ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”

ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ.