ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.
TSK
TSK · ಯೆಹೋಶುವ 6:21
مراجع Treasury of Scripture Knowledge في ಕನ್ನಡ IRV.
ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.
ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.
¶ ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು
¶ ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.
ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.
ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.
ಆತನು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು.
ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
¶ ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.