¶ ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.
TSK
TSK · ಯೂದನು 1:11
مراجع Treasury of Scripture Knowledge في ಕನ್ನಡ IRV.
¶ ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.
ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.
ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.
ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.
ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.
ಹೇಗೆಂದರೆ, ‹“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.›
¶ ‹“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.›
ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
‹ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.›‹ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ›‹ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು›‹ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.›