TSK

TSK · ಯೂದನು 1:24

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.

‹ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.›

ಯೇಸು ಅವರಿಗೆ, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ›‹ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.›

‹ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.›

¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

¶ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,

ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.

¶ ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ

ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.

ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.

ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ

ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.