TSK

TSK · ಯೂದನು 1:3

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.

ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,

ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.

ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.

ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.

ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.

¶ “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.

ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;

ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.

¶ ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,

¶ ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.

ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.

ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.

ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.

¶ ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.

¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,

¶ ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.

ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.

ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.