¶ ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.
TSK
TSK · ನ್ಯಾಯಸ್ಥಾಪಕರು 1:2
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.
ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವುದರಿಂದ ಇಸ್ರಾಯೇಲ್ಯರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ, ಬೇಡವೋ?” ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ, “ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು” ಅಂದನು.
ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.
¶ ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.