TSK

TSK · ನ್ಯಾಯಸ್ಥಾಪಕರು 1:4

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.

ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.

ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.

ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.

ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.

ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.

ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.