ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು.
TSK
TSK · ನ್ಯಾಯಸ್ಥಾಪಕರು 2:19
مراجع Treasury of Scripture Knowledge في ಕನ್ನಡ IRV.
ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.
ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.
ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.
ಉಪಶಮನವನ್ನು ಪಡೆದ ಮೇಲೆ ಅವರು ತಿರುಗಿ ದ್ರೋಹಿಗಳಾಗಿ ನಡೆಯುತ್ತಿರುವುದನ್ನು ನೀನು ಕಂಡು ಅವರ ಮೇಲೆ ದೊರೆತನ ನಡೆಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದೆ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪುನಃ ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿದೆ.
¶ ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.
ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.