TSK

TSK · ನ್ಯಾಯಸ್ಥಾಪಕರು 20:13

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,

ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.

ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.

ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

¶ ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.

ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ” ಎಂದರು.

ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು ಉತ್ತರ ಕೊಟ್ಟು,

ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.

ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.

ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.

ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.