ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.
TSK
TSK · ನ್ಯಾಯಸ್ಥಾಪಕರು 21:1
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ
¶ ಇದನ್ನು ಕೇಳಿ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗದಿರಲಿ.
ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದೆ ಇದ್ದಂಥ ಇಸ್ರಾಯೇಲರು ಯಾರಾರೆಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಪೆಯಲ್ಲಿ, “ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು” ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು.
ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ” ಎಂದು ಮಾತನಾಡಿಕೊಳ್ಳುತ್ತಿದ್ದರು.
¶ ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.
ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.
ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.
ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.