ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.
TSK
TSK · ನ್ಯಾಯಸ್ಥಾಪಕರು 3:1
مراجع Treasury of Scripture Knowledge في ಕನ್ನಡ IRV.
ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು
ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ.
ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.
ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?
ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,
¶ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.