TSK

TSK · ನ್ಯಾಯಸ್ಥಾಪಕರು 7:1

مراجع Treasury of Scripture Knowledge في ಕನ್ನಡ IRV.

العودة إلى المقطع

ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.

¶ ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.

ಆ ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.

¶ ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.