TSK

TSK · ನ್ಯಾಯಸ್ಥಾಪಕರು 7:13

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.

ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.

ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು.

ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.