TSK

TSK · ನ್ಯಾಯಸ್ಥಾಪಕರು 7:2

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.”

ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.

ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.

ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.

¶ “‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.

ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.

ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;

ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.

ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.

ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.