TSK

TSK · ನ್ಯಾಯಸ್ಥಾಪಕರು 7:8

مراجع Treasury of Scripture Knowledge في ಕನ್ನಡ IRV.

العودة إلى المقطع

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.

ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.

ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.

¶ ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.

ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.