TSK

TSK · ಪ್ರಲಾಪಗಳು 1:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.

ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,

¶ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.

ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.

ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.

ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?

ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.

ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.

ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.

ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.

ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.

ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.

“ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು.

‹ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು”› ಅಂದನು.