TSK

TSK · ಪ್ರಲಾಪಗಳು 1:19

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.

ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.

ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.

“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.

ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.

ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?

ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.