¶ ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,
TSK
TSK · ಪ್ರಲಾಪಗಳು 1:5
مراجع Treasury of Scripture Knowledge في ಕನ್ನಡ IRV.
ನಿಮಗೆ ಗಂಡು ಮತ್ತು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವುದರಿಂದ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಸಾಲ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು.
¶ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.
ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.
ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.
ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.
“ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?
ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.
ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!
ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ?
¶ ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.
“ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, ‘ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.’
ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.
ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.