ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
TSK
TSK · ಪ್ರಲಾಪಗಳು 2:6
مراجع Treasury of Scripture Knowledge في ಕನ್ನಡ IRV.
ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.
ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”
ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.
ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.
ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಆಚೆಗೆ ಸಾಗಿಸುವರು; ಅವನು ಮುಖವನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸುವುದಿಲ್ಲ.’
ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.