ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
TSK
TSK · ಪ್ರಲಾಪಗಳು 2:8
مراجع Treasury of Scripture Knowledge في ಕನ್ನಡ IRV.
ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ಭಯವು ನನ್ನನ್ನು ಹೆದರಿಸದಿರಲಿ.
ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.
ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.
ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.
“ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.