TSK

TSK · ಪ್ರಲಾಪಗಳು 2:9

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.

ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.

ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.

ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.

ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.

ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.

ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.

ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.

ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.

ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.

ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.