TSK

TSK · ಪ್ರಲಾಪಗಳು 3:22

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.

ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.

ನಿನ್ನ ದಾಸನಿಗೆ ವಿಮುಖನಾಗಬೇಡ, ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು.

ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.

ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.

¶ “‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.

¶ “ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.

ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”