ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.
TSK
TSK · ಪ್ರಲಾಪಗಳು 3:40
مراجع Treasury of Scripture Knowledge في ಕನ್ನಡ IRV.
ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”
ಮನುಷ್ಯನು ದೇವರನ್ನು ಕುರಿತು, ‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ,
ನನ್ನ ನಡತೆಯನ್ನು ಶೋಧಿಸಿದೆನು, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.
ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.
ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.
ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.