TSK

TSK · ಪ್ರಲಾಪಗಳು 4:11

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.

ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.

ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”

ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.

¶ ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!

ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.

ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.

ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.

ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.

ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.

ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.

ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.

‹ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.›