ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
TSK
TSK · ಪ್ರಲಾಪಗಳು 4:14
مراجع Treasury of Scripture Knowledge في ಕನ್ನಡ IRV.
ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.
ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.
ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”
“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.
‹ಅವರನ್ನು ಬಿಡಿರಿ, ಅವರು›‹ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು”› ಅಂದನು.