ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.
TSK
TSK · ಪ್ರಲಾಪಗಳು 4:22
مراجع Treasury of Scripture Knowledge في ಕನ್ನಡ IRV.
ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.
ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.
ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”
ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.
¶ ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.