ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
TSK
TSK · ಪ್ರಲಾಪಗಳು 5:16
مراجع Treasury of Scripture Knowledge في ಕನ್ನಡ IRV.
ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?
ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.
ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.
ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.
ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.
ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.
ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು.
ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು. ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
‹ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,›‹ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು›‹ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.›‹ನೀನು ಸಾಯುವ ತನಕ›‹ನಂಬಿಗಸ್ತನಾಗಿರು, ನಾನು ನಿನಗೆ›‹ಜೀವದ ಕಿರೀಟವನ್ನು ಕೊಡುವೆನು.›