ಯಾಜಕಕಾಂಡ 6:3
TSK
ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.
TSK
مراجع Treasury of Scripture Knowledge في ಕನ್ನಡ IRV.
ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.
ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.
ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.