ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.
TSK
TSK · ಯಾಜಕಕಾಂಡ 1:3
مراجع Treasury of Scripture Knowledge في ಕನ್ನಡ IRV.
ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.
ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.
ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.
ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.
ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.
ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.
¶ “‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.
“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.
“ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,
¶ “‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.
¶ “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.
ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.
ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.
ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
¶ ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು.
¶ “‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.
ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’”
ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು.
¶ ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.
ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.
ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.
¶ ಆಗ ಯೇಸು ಪುನಃ ಅವರಿಗೆ, ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,›
ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.
ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.
¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.